ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧೆ ಎದುರಿಸಲು ಸಜ್ಜಾಗಲು ಸಲಹೆ

ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಾ ಪುರಸ್ಕಾರ
Last Updated 10 ಜುಲೈ 2017, 7:12 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ‘ಜಾಗತೀಕರಣ ಪ್ರಭಾವ ಹೆಚ್ಚಾದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳು ಕಡಿತಗೊಳ್ಳುತ್ತವೆ’ ಎಂದು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧಕ ಡಾ.ಶಿವಕುಮಾರ್‌ ತಿಳಿಸಿದರು.

ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜನ್ಮದಿನ ಅಂಗವಾಗಿ  ಬಹುಜನ ವಿದ್ಯಾರ್ಥಿ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಎನ್‌.ಮಹೇಶ್‌ ಅವರು, ಸ್ಪರ್ಧೆಯ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಆಂಗ್ಲಭಾಷೆ, ಕಂಪ್ಯೂಟರ್‌ ಶಿಕ್ಷಣದಲ್ಲಿಯೂ ಪರಿಣಿತಿ ಪಡೆಯಬೇಕು ಎಂದು ಸಲಹೆ ಮಾಡಿದರು

ಕುದೇರು ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಗಂಗಾಧರ್‌, ಸಮಾನತೆಯ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು ಹೋರಾಡಬೇಕಿದೆ ಎಂದು ತಿಳಿಸಿದರು.

ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಜೇತವನ ಬುದರ್ಧದ್ದವಿಹಾರದ ಸುಗತಪಾಲ ಬಂತೇಜಿ, ಅಯ್ಯನಮಠ ಚಿನ್ನಸ್ವಾಮಿ, ಗ್ರಾಮಪಂಚಾಯಿತಿ ಸದಸ್ಯರಾದ ಜಯಶಂಕರ್‌, ಎಂ.ಪಿ. ಶಂಕರ್‌, ಮುಖಂಡರಾದ ಬಾಗಳಿ ರೇವಣ್ಣ, ಡಿ.ಎನ್‌. ನಟರಾಜು, ರೈತಸಂಘದ ಡಾ.ಗುರುಪ್ರಸಾದ್‌, ಚನ್ನಬಸವಯ್ಯ, ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌, ಕಲಾವಿದ ಬಸವರಾಜು, ಮಹೇಶ್‌, ಬಿವಿಎಸ್‌ ಜಿಲ್ಲಾ ಸಂಚಾಲಕ ಪರ್ವತರಾಜು ಹಾಗೂ ವಿವಿಧ ಪದಾಧಿಕಾರಿಗಳು ಮತ್ತು ಪೋಷಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT