ಈ ಬಾರಿ ಮುಂಗಾರು ಸರಿಯಾದ ಸಮಯಕ್ಕೆ ಬಂದಿದ್ದರಿಂದ ತಾಲ್ಲೂಕಿನ ಎಲ್ಲೆಡೆ ಉತ್ತಮ ಮಳೆಯಾಗಿ ಸಕಾಲಕ್ಕೆ ಬಿತ್ತನೆ ಕಾರ್ಯವೂ ನಡೆದಿದೆ. ಸೂಕ್ತ ಸಮಯದಲ್ಲಿ ಮಳೆ ಬಂದಿದ್ದರಿಂದ ಸೋಯಾಬಿನ್ ಜತೆಯಲ್ಲಿ ಹೆಸರು ಮತ್ತು ಉದ್ದಿನ ಬಿತ್ತನೆಯೂ ಹೆಚ್ಚಿನ ಪ್ರಮಾಣದಲ್ಲಿ ನಡೆಯಿತು. ತೊಗರಿ, ಸಜ್ಜೆ, ಎಳ್ಳು ಕೂಡ ಬಿತ್ತಲಾಗಿದ್ದು, ಶೇ 100 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ.