ನಗರದ ಶಿವಶರಣೆ ನಿಂಬೆಕ್ಕ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಿಐಟಿಯು ಕಾರ್ಮಿಕ ಸಂಘಟನೆಯ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರದಲ್ಲಿ ಮಾತನಾಡಿದ ಅವರು ‘ದೇಶದ ಬಹುಸಂಖ್ಯಾತ ಕಾರ್ಮಿಕರು, ರೈತರು ನಿತ್ಯವೂ ಹಸಿವು, ನೀರಡಿಕೆ, ಉದ್ಯೋಗ, ಶಿಕ್ಷಣ, ಬಡತನ, ಆರೋಗ್ಯದಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಿಲ್ಲದ ದರಿದ್ರ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ’ ಎಂದು ದೂರಿದರು.