ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Last Updated 12 ಜುಲೈ 2017, 5:07 IST
ಅಕ್ಷರ ಗಾತ್ರ

ಧಾರವಾಡ: ಪ್ರಸಕ್ತ ಸಾಲಿನ ರಾಷ್ಟ್ರೀಯ ನಾರಿಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ವ್ಯಕ್ತಿ ಮತ್ತು ಸಂಸ್ಥೆಯ ಕಾರ್ಯಕ್ಷೇತ್ರದ ಮೇಲೆ ನೀಡಲಾಗುವ ರಾಣಿ ರುದ್ರಮ್ಮದೇವಿ, ಮಾತಾ ಜೀಜಾಬಾಯಿ, ಕನ್ನಗಿದೇವಿ, ದೇವಿ ಅಹಲಯಾಬಾಯಿ ಹೋಳ್ಕರ್, ರಾಣಿ ಲಕ್ಷ್ಮಿಬಾಯಿ, ರಾಣಿ ಗೈಡಿನ್ಲೂ ಜಿಲಿಯಾಂಗ ಧೈರ್ಯ ಮತ್ತು ಶೌರ್ಯ ಪ್ರಶಸ್ತಿಗಾಗಿ ಅಗಸ್ಟ್ 10ರೊಳಗೆ  ಅರ್ಹರು ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಜಿಲ್ಲೆಯ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಈಜುಗೊಳದ ಎದುರು, ಧಾರವಾಡ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಪ್ರಧಾನ ಕಚೇರಿಗೆ ಸಲ್ಲಿಸುವಂತೆ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT