ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ತಾಲ್ಲೂಕು ಪಂಚಾಯ್ತಿ ಸದಸ್ಯೆ ಹನುಮಕ್ಕ ಜಯಣ್ಣ, ‘ಓಬನಹಳ್ಳಿ ಭೋವಿ ಕಾಲೊನಿಯಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಶೈಕ್ಷಣಿಕ ಮೂಲ ಸೌಕರ್ಯ ಒದಗಿಸಲು ಶಿಕ್ಷಣ ಇಲಾಖೆ ಮುಂದಾಗಬೇಕು. ಶೀಘ್ರವೇ ಶಾಲೆಯ ಚಾವಣಿ ದುರಸ್ತಿ ಮಾಡಿಸಲಿ’ ಎಂದು ಆಗ್ರಹಿಸಿದರು.