ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿರುಮೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಪ್ರತ್ಯಕ್ಷ

Last Updated 12 ಜುಲೈ 2017, 8:39 IST
ಅಕ್ಷರ ಗಾತ್ರ

ತರೀಕೆರೆ: ಪಟ್ಟಣದ ಸಮೀಪದ ಪಿರು ಮೇನಹಳ್ಳಿ ಗ್ರಾಮದಲ್ಲಿ  ಮಂಗಳವಾರ  ಬೆಳಿಗ್ಗೆ  6 ಗಂಟೆಯ ಸಮಯದಲ್ಲಿ ಎರಡು ಕಾಡಾನೆ ಪ್ರತ್ಯಕ್ಷವಾಗಿದ್ದು ಕೃಷಿ ಜಮೀನಿಗೆ ನುಗ್ಗಿ ದಾಂಧಲೆ ನಡೆಸಿವೆವಾಯು ವಿಹಾರಕ್ಕೆ ಹೋಗಿದ್ದ ಮಹಿಳೆಯರು ಕಾಡಾನೆಗಳು ಗ್ರಾಮದ ಮುಖ್ಯ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಕಂಡಿದ್ದಾರೆ.

ಬೇಲೆನಹಳ್ಳಿ ತಾಂಡದ ರಘು ನಾಯ್ಕ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಕಾಡಾನೆಗಳು ದಾಳಿ ಇಟ್ಟು, ಮೆಕ್ಕೆಜೋಳದ ಬೆಳೆಯನ್ನು ನಾಶಪಡಿಸಿವೆ. ಆನೆಗಳ ದಾಳಿಯಿಂದ ಗಾಬರಿಗೊಂಡಿರುವ ಗ್ರಾಮದ ರೈತರು ಆನೆಗಳಿಂದ ರಕ್ಷಣೆ ನೀಡಲು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT