ತರೀಕೆರೆ: ಪಟ್ಟಣದ ಸಮೀಪದ ಪಿರು ಮೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಎರಡು ಕಾಡಾನೆ ಪ್ರತ್ಯಕ್ಷವಾಗಿದ್ದು ಕೃಷಿ ಜಮೀನಿಗೆ ನುಗ್ಗಿ ದಾಂಧಲೆ ನಡೆಸಿವೆವಾಯು ವಿಹಾರಕ್ಕೆ ಹೋಗಿದ್ದ ಮಹಿಳೆಯರು ಕಾಡಾನೆಗಳು ಗ್ರಾಮದ ಮುಖ್ಯ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಕಂಡಿದ್ದಾರೆ.
ಬೇಲೆನಹಳ್ಳಿ ತಾಂಡದ ರಘು ನಾಯ್ಕ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಕಾಡಾನೆಗಳು ದಾಳಿ ಇಟ್ಟು, ಮೆಕ್ಕೆಜೋಳದ ಬೆಳೆಯನ್ನು ನಾಶಪಡಿಸಿವೆ. ಆನೆಗಳ ದಾಳಿಯಿಂದ ಗಾಬರಿಗೊಂಡಿರುವ ಗ್ರಾಮದ ರೈತರು ಆನೆಗಳಿಂದ ರಕ್ಷಣೆ ನೀಡಲು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.