‘ಇತ್ತೀಚಿನ ದಿನಗಳಲ್ಲಿ ರೈತರು ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುವುದೇ ತಪ್ಪಾಗಿದೆ. ಹೋರಾಟಕ್ಕೆ ಮುಂದಾದರೆ ಸರ್ಕಾರ ಅವರ ಮೇಲೆ ದೌರ್ಜನ್ಯ ನಡೆಸಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತದೆ. ದೇಶದಲ್ಲಿ ಕೃಷಿ ಕ್ಷೇತ್ರ ಬಿಕ್ಕಟ್ಟಿನಲ್ಲಿದ್ದು, ರೈತರ ಸಮಸ್ಯೆಗಳಿಗೆ ಸರ್ಕಾರಗಳ ದುರಾಡಳಿತವೇ ಮೂಲ ಕಾರಣ’ ಎಂದು ದೂರಿದರು.