‘ಮಾವಿನ ಬೆಳೆಗೆ ಹನಿ ನೀರಾವರಿ ಅಳವಡಿಸಿ ಕೊಳ್ಳುವುದು ಉತ್ತಮ. ಇದರಿಂದ ನೀರಿನ ಸದ್ಬಳಕೆ ಮತ್ತು ಕಾಯಿ ಉದುರುವುದು ಕಡಿಮೆ ಯಾಗುತ್ತದೆ’ ಎಂದು ಅವರು ವಿವರಿಸಿದರು. ಗಿಡ ಸವರುವಿಕೆ ರೀತಿ, ಕೀಟಗಳ ನಿರ್ವಹಣೆ, ಬೇಸಾಯ ಕ್ರಮಗಳು, ತೋಟಗಳ ಪುನಶ್ಚೇತನ, ವಿಮೆ, ಹೊಸ ತೋಟಗಳ ಸ್ಥಾಪನೆಗೆ ಸರ್ಕಾರದಿಂದ ಸಿಗುವ ಸಹಾಯಧನ, ಹನಿ ನೀರಾವರಿ ವಿಷಯಗಳ ಬಗ್ಗೆ ವಿಜ್ಞಾನಿಗಳು ಮತ್ತು ಅಧಿಕಾರಿಗಳು ತಿಳಿಸಿದರು.