ಕೃತಜ್ಞತೆ: ಸುಕ್ರಿ ಅವರು ಆಸ್ಪತ್ರೆಯಿಂದ ಹೊರಡುವ ವೇಳೆ ‘ಅಜ್ಜಿಯ ಬಾಯೊಳು ಹಲ್ಲಿಲ್ಲ... ಮೊಸರು ಅವಲಕ್ಕಿ..’ ಎಂಬ ಜನಪದ ಗೀತೆ ಹಾಡಿದರು. ಅಲ್ಲದೇ ಆರೈಕೆ ಮಾಡಿದ ವೈದ್ಯರು, ಸಿಬ್ಬಂದಿಗೆ ಕೈ ಮುಗಿದು ಧನ್ಯವಾದ ತಿಳಿಸಿದರು. ಬಳಿಕ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ತಮ್ಮ ಕಾರಿನಲ್ಲಿ ಅವರನ್ನು ಊರಿಗೆ ಕರೆದೊಯ್ದರು.