ಬಸ್ ಸೇವೆ: ‘ಜಿಲ್ಲಾ ಸೌಧಕ್ಕೆ ಬರುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಬಸ್ ಸೇವೆ ಕಲ್ಪಿಸಲಾಗುತ್ತದೆ. ನಗರದ ಬೆಳವಣಿಗೆ ದೃಷ್ಟಿಯಿಂದ ಜಿಲ್ಲಾ ಸೌಧ ಸೂಕ್ತ ಸ್ಥಳದಲ್ಲೇ ನಿರ್ಮಾಣವಾಗಿದ್ದು, ಇದಕ್ಕೆ ಯಾವುದೇ ವಿರೋಧ ವ್ಯಕ್ತವಾಗಿಲ್ಲ’ ಎಂದು ತಿಳಿಸಿದರು.