ಉರುವಲು, ಕೃಷಿ ಮತ್ತಿತರ ಕಾರಣಗಳಿಗಾಗಿ ನಿರಂತರವಾಗಿ ಅರಣ್ಯ ನಾಶ ಮಾಡಲಾಗಿದೆ. ಇದು ಪರಿಸರ ಸಮತೋಲನದ ಮೇಲೆ ಪರಿಣಾಮ ಬೀರಿದೆ. ಹಲವು ಪ್ರಭೇದಗಳ ಕಾಡು ಪ್ರಾಣಿ, ಪಕ್ಷಿಗಳಿಗೆ ನೆಲೆ ಇಲ್ಲದೇ ವಿನಾಶದತ್ತ ಸಾಗಿವೆ. ಕಾಡು ನಾಶದ ಪರಿಣಾಮ ಪರಿಸರ ಕಲ್ಮಶವಾಗುತ್ತಿದೆ. ಶುದ್ಧ ಗಾಳಿ, ಸಮೃದ್ಧ ಮಳೆಯ ಕೊರತೆಯಾಗಿದೆ. ಇದು ಆಹಾರ ಭದ್ರತೆಗೂ ಅಪಾಯ ತಂದೊಡ್ಡಿದೆ ಎಂದು ಕಳವಳ ವ್ಯಕ್ತಪಡಿಸಿದರು.