ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿಲ್ಲ. ಮೂರನೇ ಹಂತದಲ್ಲಿ ಬಿಡುಗಡೆಯಾದ ವಿಶೇಷ ಅನುದಾನ ಗಳನ್ನು ಕುಗ್ರಾಮಗಳ ಗ್ರಾಮೀಣ ರಸ್ತೆಗಳಿಗೆ ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಕೊಡವ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಕೆ.ಅಬ್ದುಲ್ ರಜಾಕ್, ಪೊನ್ನಪ್ಪ, ಸುರೇಶ್ ಇದ್ದರು.