‘ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಇರುವ ಕಾರಣ ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಬಿಡುವಂತೆ ಜಿಲ್ಲಾಧಿಕಾರಿ ಮನವಿ ಮೇರೆಗೆ ಕಲಬುರ್ಗಿಯ ಪ್ರಾದೇಶಿಕ ಆಯುಕ್ತರು ಕರ್ನಾಟಕ ನೀರಾವರಿ ನಿಗಮದ ಮುನಿರಬಾದ್ ವೃತ್ತದ ಮುಖ್ಯ ಎಂಜಿನಿಯರ್ ಅವರಿಗೆ ಆದೇಶ ನೀಡಿದ್ದಾರೆ. ಪ್ರಾದೇಶಿಕ ಆಯುಕ್ತರ ಆದೇಶದಂತೆ ಕೂಡಲೇ ತುಂಗಭದ್ರಾ ಎಡದಂಡೆ ಕಾಲುವೆ ನೀರು ಹರಿಸಬೇಕು’ ಎಂದು ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ ಆಗ್ರಹಿಸಿದ್ದಾರೆ.