‘ಜಿಎಸ್ಟಿಯಿಂದ ತೆರಿಗೆ ಸೋರಿಕೆ ಕಡಿಮೆಯಾಗಲಿದೆ. ವ್ಯಾಪಾರಿಗಳು ಲೆಕ್ಕ ಪತ್ರ ಇಡುವುದು ಸುಲಭವಾಗಿದೆ’ ಎಂದು ಹೇಳಿದರು. ಸಂಘದ ಅಧ್ಯಕ್ಷ ಬಸವರಾಜ ಭಂಡೆ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಜಿ.ಪಿ. ಶ್ರೀನಿವಾಸ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಉಪಸ್ಥಿತರಿದ್ದರು.