ಸಂಪನ್ಮೂಲ ವ್ಯಕ್ತಿ ಸಿದ್ರಾಮಯ್ಯ ಸ್ವಾಮಿ ಮಾತನಾಡಿ, ಡೆಂಗಿ ವಿಶೇಷವಾಗಿ ಮಳೆಗಾಲದಲ್ಲಿ ಅತಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಎಂದು ಹೇಳಿದರು. ಉಪನ್ಯಾಸಕಿ ಸಂಗೀತಾ ಮಠಪತಿ ಮಾತನಾಡಿ, ಮನೆ ಮಕ್ಕಳ ಮೊದಲ ಪಾಠ ಶಾಲೆ ಎಂಬಂತೆ ಮಕ್ಕಳ ಪಾಲಿಗೆ ಪಾಲಕರು ಮನೆ ಮೊದಲ ಆಸ್ಪತ್ರೆಯಾಗಬೇಕು. ಈ ನಿಟ್ಟಿನಲ್ಲಿ ಪಾಲಕರು ಮನೆಯಲ್ಲಿ, ಶಿಕ್ಷಕರು ಶಾಲೆಯಲ್ಲಿ ಶುಚಿತ್ವದ ಅರಿವು ಮೂಡಿಸಬೇಕು ಎಂದರು.