ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಚ್ಛ ಪರಿಸರ ಆರೋಗ್ಯಕ್ಕೆ ಪೂರಕ’

Last Updated 15 ಜುಲೈ 2017, 9:01 IST
ಅಕ್ಷರ ಗಾತ್ರ

ಮುಳಗುಂದ: ನಾವು ವಾಸಿಸುವ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡಬೇಕು. ನಮ್ಮ ಮನೆ, ಗ್ರಾಮದ ಎಲ್ಲರೂ ಸೇರಿ ಸ್ವಚ್ಛತೆಯ ಅರಿವು ಹೊಂದಿದಾಗ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಹೇಳಿದರು.

ಸಮೀಪದ ಸೊರಟೂರ ಗ್ರಾಮದಲ್ಲಿ ಬಿಜೆಪಿ ಘಟಕ ಹಾಗೂ ಸ್ವಸಹಾಯ ಸಂಘಗಳಿಂದ ಸ್ವಚ್ಛ ಭಾರತ ಅಭಿಯಾನ ದಡಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು  ಮಾತನಾಡಿದರು.

ಗದಗ ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ಭದ್ರೇಶ ಕುಸ್ಲಾಪುರ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಪರಿಕಲ್ಪನೆಯನ್ನು ಜಾರಿಗೆ ತಂದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯುವಕರನ್ನು ಪ್ರೇರೆಪಿಸುತ್ತಿದ್ದಾರೆ ಎಂದರು.

ಜಿಲ್ಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಮೋಹನ ಮಾಳಶೆಟ್ಟಿ, ಮುಖಂಡರಾದ ರಾಮಣ್ಣ ಕಮ್ಮಾರ, ಮಾಹಾಂತೇಶ ನಲೂಡಿ, ಎಂ.ಜಿ.ಗಿಡ್ಡ ಕೆಂಚಣ್ಣವರ, ಆರ್.ವೈ.ಶೆಲೇಪ್ಪನವರ, ಮಹಾದೇವಪ್ಪ ಹಡಪದ, ಬಿಜೆಪಿ ನಗರ ಮಹಿಳಾ ಘಟಕದ ಅಧ್ಯಕ್ಷ ಶಾರದಾ ಹಿರೇಮಠ, ರತ್ನಾ ದಾಸರ, ಬಿ.ಎಚ್. ಪಾಟೀಲ, ವೈ.ಪಿ.ಅಡ್ನೂರ, ಪಿ.ಎಲ್. ಮುಳಗುಂದ, ಕೃಷ್ಣಾ ಘೋಡಕೆ, ಬಸವ ರಾಜ ಚವ್ಹಾಣ, ದಾಸಪ್ಪ ಮಾದಣ್ಣವರ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮಹಿಳಾ ಸ್ವಸಾಹಾಯ ಗುಂಪುಗಳ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT