ಮಾಜಿ ಶಾಸಕರುಗಳಾದ ಜೆ.ಡಿ. ನಾಯ್ಕ, ದಿನಕರ ಶೆಟ್ಟಿ ತಹಶೀಲ್ದಾರ್ ಕಚೇರಿಗೆ ಬರುವ ಸಾರ್ವಜನಿಕರು ತಿಂದು ಎಸೆದ ಗುಟ್ಕಾ, ಪಾನ್ ಮಸಾಲಾ ಪ್ಯಾಕೇಟಿನ ಪ್ಲಾಸ್ಟಿಕ್ ತ್ಯಾಜ್ಯ ಆರಿಸಿ ಒಟ್ಟುಗೂಡಿಸಿದರು. ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಕುಮಾರ ಮಾರ್ಕಾಂಡೆ, ಯುವ ಘಟಕ ಅಧ್ಯಕ್ಷ ಹೇಮಂತ ಗಾಂವ್ಕರ್ ರಸ್ತೆ ಬದಿ ಸಂಗ್ರಹಗೊಂಡಿದ್ದ ಕಸ, ಕೆಸರನ್ನು ಗುದ್ದಲಿಯಲ್ಲಿ ಗುಡ್ಡೆ ಹಾಕಿ ಪುರಸಭೆ ವಾಹನಕ್ಕೆ ತುಂಬುವ ವ್ಯವಸ್ಥೆ ಮಾಡಿಸಿದರು.