ಉತ್ತಮ ಇಳುವರಿಯ ಕನಸು ಕಂಡಿದ್ದ ರೈತರ ಮೊಗದಲ್ಲಿ ಈಗ ನಿರಾಶೆಯ ಕಾರ್ಮೋಡ ಕವಿದಿದೆ. ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟದಿಂದ ನಿರ್ವಹಣಾ ವೆಚ್ಚದ ಹೊರೆ ನಿಭಾಯಿ ಸುವುದು ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಸರಬರಾಜು ಆಗಿರುವ ಭತ್ತ, ಸೂರ್ಯ ಕಾಂತಿ, ಮೆಕ್ಕೆಜೋಳ, ತೊಗರಿ, ಸಜ್ಜೆ ಬೀಜದ ದಾಸ್ತಾನು ಮಾರಾಟವಾಗದೇ ಉಳಿದಿದೆ.