ಗುಜರಾತ್ನಲ್ಲಿ ಹಿಂಸಾಚಾರ: ಅಶ್ರುವಾಯು, ಗಾಳಿಯಲ್ಲಿ ಗುಂಡು
ಅಹಮದಾಬಾದ್, ಜುಲೈ 15– ಇಲ್ಲಿನ ಭಾವನಗರದಲ್ಲಿ ಇಂದು ಪ್ರತಿಭಟನಾಕಾರರ ಗುಂಪು ಹಿಂಸಾಚಾರಕ್ಕೆ ಇಳಿದದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಲ್ಲದೆ ಹಲವು ಸುತ್ತು ಅಶ್ರುವಾಯು ಶೆಲ್ಗಳನ್ನೂ ಸಿಡಿಸಬೇಕಾಯಿತು. ಅಷ್ಟಕ್ಕೂ ಗಲಭೆ ನಿಯಂತ್ರಣಕ್ಕೆ ಬಾರದಿದ್ದಾಗ ಮೀಸಲು ಪಡೆಯ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.