ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಸಾಮಾಜಿಕ ನ್ಯಾಯ: ಪ್ರಕಾಶ್‌

Last Updated 16 ಜುಲೈ 2017, 8:57 IST
ಅಕ್ಷರ ಗಾತ್ರ

ಮೊಳಕಾಲ್ಮುರು: ‘ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಹಾಗೂ ಮಾಜಿ ಸಂಸದ ಎನ್‌.ವೈ.ಹನುಮಂತಪ್ಪ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ಹುದ್ದೆ ನೀಡಿ ಕಾಂಗ್ರೆಸ್‌ ಸಾಮಾಜಿಕ ನ್ಯಾಯ ಮೆರೆದಿದೆ’ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ. ಪ್ರಕಾಶ್‌ ಹೇಳಿದರು.

ನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೊಳಕಾಲ್ಮುರಿನಂತಹ ಗಡಿ, ಹಿಂದುಳಿದ ತಾಲ್ಲೂಕಿಗೆ ಸೇರಿದ ಹನುಮಂತಪ್ಪ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಈ ಭಾಗದ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ. ನಾಯಕ ಜನಾಂಗಕ್ಕೆ ರಾಜಕೀಯ ಪ್ರಾಬಲ್ಯವೂ ನೀಡಿದಂತಾಗಿದೆ.

ಇದನ್ನು ಕಾರ್ಯಕರ್ತರು ಹಾಗೂ ಮುಖಂಡರು ಸದುಪಯೋಗ ಮಾಡಿಕೊಂಡು ಪಕ್ಷದ ಬೆಳವಣಿಗೆಗೆ ಸಹಕಾರ ನೀಡಬೇಕು’ ಎಂದು ಹೇಳಿದರು. ‘ಎನ್‌ವೈಎಚ್ ಸಂಸದರಾಗಿದ್ದಾಗ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿ ಮಾಡಿಸಿದರು. ಕುದಾಪುರ, ದೊಡ್ಡ ಉಳ್ಳಾರ್ತಿಯಲ್ಲಿ ವಿಜ್ಞಾನಕೇಂದ್ರಗಳ ಸ್ಥಾಪನೆಯಲ್ಲಿ ಅವರ ಶ್ರಮ ಅಪಾರ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT