ನವದೆಹಲಿ: ಉಗ್ರರರ ದಾಳಿಯಲ್ಲಿ ಮೃತಪಟ್ಟ ಅಮರನಾಥ ಯಾತ್ರಿಗಳು ಹಾಗೂ ಮಾಜಿ ಸದಸ್ಯರ ನಿಧನಕ್ಕೆ ಸಂತಾಪ ಸೂಚಿಸಿ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ಸೋಮವಾರದಿಂದ ಸಂಸತ್ ಮುಂಗಾರು ಅಧಿವೇಶನ ಆರಂಭಗೊಂಡಿದೆ. ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಅಮರನಾಥ ಯಾತ್ರಾರ್ಥಿಗಳು ಹಾಗೂ ಸಂಸತ್ ಮಾಜಿ ಸದಸ್ಯರ ನಿಧನಕ್ಕೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸಂತಾಪ ಸೂಚಿಸಿದರು.
ಮೌನಾಚರಿಸಿ ಸದಸ್ಯರು ಸಂತಾಪ ಸೂಚಿಸಿದ ಬಳಿಕ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಇದಕ್ಕೂ ಮುನ್ನ ಫಾರೂಕ್ ಅಬ್ದುಲ್ಲಾ ಮತ್ತು ಪಿ.ಕುನ್ಹಲಿಕುಟ್ಟಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಉಗ್ರರ ದಾಳಿ ಕುರಿತು ಖಂಡನೆ ವ್ಯಕ್ತಪಡಿಸಿ ಮೃತ ಯಾತ್ರಾರ್ಥಿಗಳಿಗೆ ಸಂತಾಪ ಸೂಚಿಸಿದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ರಾಜ್ಯಸಭಾ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.
ದೇಶದ ನೂತನ ರಾಷ್ಟ್ರಪತಿ ಆಯ್ಕೆಗಾಗಿ ಸೋಮವಾರ ಮತದಾನ ಪ್ರಕ್ರಿಯೆಯು ನಡೆಯುತ್ತಿದೆ.
I hope all political parties, #MPs will work for national interest & will engage in high standard of debate, provide value addition: PM.