ಮಾಲೂರು: ಕರ್ತವ್ಯ ಲೋಪದ ಆರೋಪದ ಮೇಲೆ ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ (ಟಿಎಚ್ಒ) ಡಾ.ಪ್ರಸನ್ನ ಕುಮಾರ್, ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ (ಎಎಂಒ) ಡಾ.ರವಿ ಶಂಕರ್, ಕಿರಿಯ ಆರೋಗ್ಯ ನಿರೀಕ್ಷಕಿ ನೀಲಿಮಾ ಹಾಗೂ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ತಂತ್ರಜ್ಞ ನಂದನ್ ಕುಮಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅಮಾನತುಗೊಳಿಸಿದ್ದಾರೆ.