ಬೆಳಿಗ್ಗೆ 11.30ರ ವೇಳೆಯಾದರೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಇತರೆ ಸಿಬ್ಬಂದಿ ಹಾಜರಿರಲಿಲ್ಲ. ತಮ್ಮ ಕೆಲಸಗಳಿಗಾಗಿ ಕಚೇರಿ ಬಳಿ ಬಹಳಷ್ಟು ಮಂದಿ ಕಾಯುತ್ತಿದ್ದರು. ಈ ವೇಳೆ ಬಂದ ಸಿಬ್ಬಂದಿ ಕಚೇರಿ ಬಾಗಿಲು ತೆರೆಯಲು ಮುಂದಾದಾಗ ಗ್ರಾಮಸ್ಥರು ಹರಿಹಾಯ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಗ್ರಾಮ ಪಂಚಾಯಿತಿ ಸದಸ್ಯರಾದ ಈರೇಗೌಡ, ಕೃಷ್ಣೇಗೌಡ, ಗ್ರಾ.ಪಂ ಸದಸ್ಯೆಯ ಪತಿ ಕೇಶವ ಜನರ ಅಹವಾಲುಗಳನ್ನು ಕೇಳಿದರು.