ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ನಿರೀಕ್ಷಕ ದರ್ಶನ್, ‘ಬಯಲು ಸೀಮೆಯಿಂದ ಬಂದ ಕಾರ್ಮಿಕರಿಗೆ ಸಾಮಾನ್ಯ ಜ್ವರ ಕಾಣಿಸಿಕೊಂಡಿದೆ. ಮಳೆಗಾಲವಾದ್ದರಿಂದ ಸಾಂಕ್ರಾಮಿಕ ರೋಗಗಳಾದ ಡೆಂಗಿ,ಚಿಗೂನ್ಗುನ್ಯ, ಮಲೇರಿಯಾ, ಎಚ್1ಎನ್1ರೋಗಗಳು ಹೆಚ್ಚಾಗಿ ಹರಡುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಕ್ತ ಪರೀಕ್ಷೆಗೆ ಕಳಿಸಿದ್ದೇವೆ. ಪರಿಸರದಲ್ಲಿ ಶುಚಿತ್ವ ಕಾಪಾಡುವಂತೆ ಸಲಹೆ ಮಾಡಲಾಗಿದೆ. ರಕ್ತಪರೀಕ್ಷೆಯ ಫಲಿತಾಂಶ ನೋಡಿ ಅಗತ್ಯ ಇದ್ದರೆ ಚಿಕಿತ್ಸೆ ನೀಡಲಾಗುವುದು’ ಎಂದರು.