'ಮೊದಲ ವಿಶ್ವ ಕನ್ನಡ ಸಮ್ಮೇಳನದಲ್ಲಿ ಮಾತನಾಡಿದ್ದ ಕುವೆಂಪು ಅವರು ಪ್ರಾಥಮಿಕ ಶಿಕ್ಷಣದಿಂದ ಪದವಿ ಪೂರ್ಣಗೊಳ್ಳುವವರೆಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವಂತೆ ಕರೆ ನೀಡಿದ್ದರು. ಎರಡನೇ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಸುವಂತೆ ಕರೆನೀಡಿದ್ದರು. ನಾರಾಯಣಮೂರ್ತಿಯಂತಹ ಕನ್ನಡ ದ್ರೋಹಿಗಳನ್ನು, ಕನ್ನಡ ಶಬ್ದ ಉಚ್ಚರಿಸದ ಐಶ್ವರ್ಯ ರೈ, ದೀಪಿಕಾ ಪಡುಕೋಣೆ ಅಂತಹವರನ್ನೂ ಕರೆಯುವುದು ಬೇಡ' ಎಂದು ಸಭೆಯಲ್ಲಿ ಪ್ರೊ. ಚಂದ್ರಶೇಖರ್ ಪಾಟೀಲ, ಕುಂ.ವೀರಭದ್ರಪ್ಪ ಆಗ್ರಹಿಸಿದರು.