* ಮೂರು ದಿನ ನಿಷೇಧಾಜ್ಞೆ
ಬೆಂಗಳೂರು, ಜುಲೈ 18– ಬುಧವಾರದಿಂದ ಜಾರಿಯಾಗುವಂತೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮೂರು ದಿನಗಳ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಸಕ ಶ್ರೀ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಚಳವಳಿಗಾರರು ನಗರದಲ್ಲಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಮತ್ತು ಬುಧವಾರ ಬಂದ್ಗೆ ಕರೆ ನೀಡಿದ್ದರಿಂದಾಗಿ ಶಾಂತಿಭಂಗವಾಗುವ ಸಾಧ್ಯತೆ ಇರುವುದರಿಂದ ನಿಷೇಧಾಜ್ಞೆ ಹೇರಲಾಗಿದೆ. ಈ ಮೂರು ದಿನಗಳಲ್ಲಿ ಮೆರವಣಿಗೆ, ಪ್ರತಿಭಟನೆ ನಡೆಸುವುದಾಗಲೀ, ಮೂರಕ್ಕಿಂತ ಹೆಚ್ಚು ಜನರು ಒಂದು ಕಡೆ ಸೇರುವುದಾಗಲೀ ಮಾಡಬಾರದು ಎಂದು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.