ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಈಗಾಗಲೇ ನೇಮಿಸಿಕೊಂಡಿರುವ ಅತಿಥಿ ಉಪನ್ಯಾಸಕರನ್ನು ಬಿಟ್ಟು ಹೊಸದಾಗಿ ನೇಮಿಸಿಕೊಳ್ಳುವುದಕ್ಕೆ ಮೂರು ದಿನ ತಾತ್ಕಾಲಿಕ ತಡೆ ನೀಡಿ ಕಾಲೇಜು ಶಿಕ್ಷಣ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.
‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶ ಸರ್ಕಾರದಿಂದ ಅಂತಿಮಗೊಂಡು ಬಂದಿವೆ. ಈ ಅಭ್ಯರ್ಥಿಗಳಿಗೆ ಸ್ಥಳ ನಿಯೋಜನೆ ಕೌನ್ಸೆಲಿಂಗ್ ನಡೆಸಲಾಗುವುದು. ಬಳಿಕ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುವುದು’ ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.