ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ಷಾ ಆಗಸ್ಟ್ 12 ರಿಂದ ಮೂರು ದಿನಗಳ ಕಾಲ ನಗರಕ್ಕೆ ಭೇಟಿ ನೀಡಲಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿ ಬಗ್ಗೆ ರಾಜ್ಯ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮೂರು ದಿನಗಳ ಕಾಲ ಏನೆಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂಬ ಬಗ್ಗೆ ಪಟ್ಟಿಯನ್ನು ಅಮಿತ್ಷಾ ಅವರಿಗೆ ಕಳುಹಿಸಲಾಗಿದೆ. ಅವರ ಒಪ್ಪಿಗೆ ಬಂದ ಬಳಿಕ ಅಧಿಕೃತಗೊಳಿಸಲಾಗುವುದು ಎಂದು ಮೂಲಗಳು ಹೇಳಿವೆ.