ಉತ್ತಮ ಮಳೆ
ತೀರ್ಥಹಳ್ಳಿ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ. ಆಗುಂಬೆ ಭಾಗದ ಘಟ್ಟಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿರುಸಾಗಿದೆ. ಪ್ರಮುಖ ನದಿಗಳಾದ ತುಂಗಾ, ಮಾಲತಿ, ಕುಶಾವತಿ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆ ಕಂಡಿದೆ. ಜೂನ್ ತಿಂಗಳಲ್ಲಿ ಮಳೆ ಕ್ಷೀಣಿಸಿದ್ದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದರು. ಜುಲೈ ಎರಡನೇ ವಾರ ಮಳೆ ಚುರುಕಾಗಿದ್ದು, ಕೃಷಿ ಚಟುವಟಿಕೆಗೆ ಚಾಲನೆ ಸಿಗಲಿದೆ.