ಕೊಪ್ಪಳ: ಹೈದರಾಬಾದ್–ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಹಾಗೂ ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷಗುಪ್ತಾ ಅವರು ಸೋಮವಾರ ಜಿಲ್ಲೆಯಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ತಳಕಲ್ ಬಳಿ ನಿರ್ಮಾಣವಾಗುತ್ತಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು ನಿರ್ಮಾಣದ ಶಿಸ್ತು, ತಾಂತ್ರಿಕತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.
ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಬಿ.ವೈ. ಬಂಡಿವಡ್ಡರ್ ಅವರು ಕಾಮಗಾರಿ ವಿವರಣೆ ನೀಡಿದರು. ತಳಕಲ್ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ವೀಕ್ಷಿಸಿದರು. ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪಂಚಾಯಿತಿ ಸಿಇಒ ವೆಂಕಟರಾಜಾ ಇದ್ದರು.