ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯಚಂದ್ರ, ‘ಜಿಲ್ಲಾ ವ್ಯಾಪ್ತಿಯಲ್ಲಿನ ಗ್ರಾಮೀಣ ಪಂಚಾಯತ್, ಸಂಸ್ಥೆಗಳು, ಪುರಸಭೆ, ಪಟ್ಟಣ ಪಂಚಾಯತಿ, ನಗರಸಭೆಗಳಿಂದ ಸ್ವೀಕೃತವಾಗುವ ಯೋಜನಾ ವರದಿಗಳನ್ನು ದೃಢೀಕರಿಸಿ, ಸ್ಥಳೀಯ ಸಂಪನ್ಮೂಲ ಹಾಗೂ ಅನುದಾನವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಅಭಿವೃದ್ಧಿಗೆ ವಾರ್ಷಿಕ ಮುನ್ನೋಟವನ್ನು ಸಿದ್ಧಪಡಿಸುವುದು ಈ ಸಮಿತಿಯ ಕರ್ತವ್ಯವಾಗಿದೆ’ ಎಂದು ಹೇಳಿದರು.