ನವದೆಹಲಿ: ಉದ್ಯೋಗಿಗಳು ನಿವೃತ್ತರಾಗುವ ದಿನವೇ ಪಿಂಚಣಿ ಪ್ರಯೋಜನಗಳನ್ನು ಇತ್ಯರ್ಥಪಡಿಸಬೇಕು ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
‘ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಯೋಜನೆ 1952 ಮತ್ತು ಪಿಂಚಣಿ ಯೋಜನೆ 1995ರ ಹಣ ಪಾವತಿ ಮತ್ತು ಪಿಂಚಣಿ ಸೌಲಭ್ಯಗಳನ್ನು ನಿವೃತ್ತರಾಗುವ ದಿನವೇ ಇತ್ಯರ್ಥಪಡಿಸಲು ಸೂಚಿಸಲಾಗಿದೆ’ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ರಾಜ್ಯಸಭೆಗೆ ತಿಳಿಸಿದ್ದಾರೆ.