‘ಇಲ್ಲಿಯವರೆಗೆ ನಡೆದ ಘಟನಾವಳಿಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳಲಿಲ್ಲ. ಕೆಲವು ವಾರಗಳಿಂದ ತಂಡದ ಪ್ರತಿಯೊಬ್ಬರೂ ಸಂಕಷ್ಟ ಅನುಭವಿಸಿದ್ದಾರೆ. ವಿಮರ್ಶೆಗೆ ಒಳಗಾಗಿದ್ದಾರೆ. ತಂಡ ವಿಮರ್ಶೆಗೆ ಒಳಗಾಗುವುದು ಹೊಸದೇನೂ ಅಲ್ಲವಾದ್ದರಿಂದ ಶ್ರೀಲಂಕಾ ಪ್ರವಾಸದ ಸಂದರ್ಭದಲ್ಲಿ ನಾನು ಒತ್ತಡಕ್ಕೆ ಒಳಗಾಗುವುದಿಲ್ಲ. ನನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ಪ್ರಯತ್ನ ಹಾಕಲಿದ್ದೇನೆ’ ಎಂದು ಭಾರತ ತಂಡದ ನಾಯಕ ಹೇಳಿದ್ದಾರೆ.