ಪರಪ್ಪನ ಅಗ್ರಹಾರದಲ್ಲಿದ್ದ ಮೂವರು ಕೈದಿಗಳನ್ನು ಇಲ್ಲಿನ ಹಿಂಡಲಗಾದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಇದೇ 16ರಂದು ಸ್ಥಳಾಂತರಿಸಲಾಗಿತ್ತು. ಜೈಲಿನಲ್ಲಿನ ಅಕ್ರಮಗಳ ಮಾಹಿತಿ ಕೊಟ್ಟಿದ್ದರಿಂದ ಸಿಟ್ಟಿಗೆದ್ದಿರುವ ಅಲ್ಲಿನ ಹಿರಿಯ ಅಧಿಕಾರಿಯೊಬ್ಬರು ತೀವ್ರವಾಗಿ ಥಳಿಸಿ, ನಂತರ ಬೆಳಗಾವಿಗೆ ಕಳುಹಿಸಿಕೊಟ್ಟಿದ್ದರು ಎಂದು ಆರೋಪಿಸಲಾಗುತ್ತಿದೆ. ಆರೋಪ ತಳ್ಳಿಹಾಕಿರುವ ಶೇಷ ಅವರು, ‘ಬೆಂಗಳೂರಿನಿಂದ ಬಂದಿರುವ ಕೈದಿಗಳೆಲ್ಲರೂ ಆರೋಗ್ಯವಾಗಿದ್ದಾರೆ. ಹೀಗಾಗಿ, ಅವರಿಗೆ ಚಿಕಿತ್ಸೆ ಕೊಡಿಸುವ ಪ್ರಮೇಯವೇ ಬರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.