ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಸ್ಪರ್ಶಕ್ಕೆ ಆನೆ ಬಲಿ

Last Updated 19 ಜುಲೈ 2017, 19:32 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ತಾಲ್ಲೂಕಿನ ದೇವಲಾಪುರ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಗಂಡಾನೆ ಬುಧವಾರ ಮೃತಪಟ್ಟಿದೆ.

ಲಕ್ಷ್ಮಣೇಗೌಡ ಎಂಬುವರ ಜಮೀನಿನಲ್ಲಿ ಹತ್ತಿ ಬೆಳೆಯಲಾಗಿದ್ದು, ಕಾಡುಹಂದಿ ಹಾವಳಿ ತಡೆಗೆ ಜಮೀನಿನ ಸುತ್ತ ತಂತಿಬೇಲಿ ಹಾಕಿದ್ದರು. ಇದಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದು, ಸ್ಪರ್ಶಿಸಿದ ಆನೆ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆನೆಗೆ 52–55 ವರ್ಷ ವಯಸ್ಸಾಗಿತ್ತು ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹೇಳಿದ್ದಾರೆ.

ಜೂ. 8ರಂದು ಬಂಡೀಪುರ ಅರಣ್ಯದಂಚಿನ ಬೊಮ್ಮಹಳ್ಳಿಯಲ್ಲೂ ಜಮೀನಿನ ರಕ್ಷಣೆಗೆ ಹಾಕಿದ್ದ ವಿದ್ಯುತ್ ತಂತಿಬೇಲಿ ಸ್ಪರ್ಶಿಸಿ ಆನೆ ಮೃತಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT