ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಪ್ರತಿಷ್ಠಾನದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ವ್ಯಸನ ಮುಕ್ತರಾಗಲು ಬರುವವರಿಗೆ ಕೆಲವು ಆಚರಣೆಗಳು ಮತ್ತು ಮನೋಸ್ಥೈರ್ಯ ನೀಡುವ ಚಿಕಿತ್ಸೆ ಇದೆ. ಆದರೆ, ದುರ್ಬಲ ಮನಸ್ಸಿನವರಿಗೆ ಹಾಲಿ ಇರುವ ಚಿಕಿತ್ಸಾ ವಿಧಾನದಿಂದ ಪ್ರಯೋಜನ ಆಗುತ್ತಿಲ್ಲ. ಹೀಗಾಗಿ ಆಧುನಿಕ ಚಿಕಿತ್ಸಾ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.