ಸಿ.ಎಂ ಕಚೇರಿಯಲ್ಲಿ 16 ಮಂದಿ
ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆ ಅಧ್ಯಕ್ಷೆ ಜೆ.ಎನ್. ಜಯಶ್ರೀ, ‘1977ರಿಂದ ಇದು ನಡೆದುಕೊಂಡು ಬರುತ್ತಿದೆ. ಸರ್ಕಾರಕ್ಕೆ ಈ ವಿಷಯ ತಿಳಿದಿದ್ದರೂ, ಅದನ್ನು ಉಲ್ಲಂಘಿಸುತ್ತಿದೆ. ಮುಖ್ಯಮಂತ್ರಿ ಅವರ ಕಚೇರಿಯಲ್ಲಿಯೇ 16 ನಿವೃತ್ತ ಅಧಿಕಾರಿಗಳಿದ್ದಾರೆ. ಭ್ರಷ್ಟಾಚಾರಕ್ಕೆ ಬೆಂಬಲ ನೀಡಬೇಕೆನ್ನುವ ಅಲಿಖಿತ ಒಪ್ಪಂದದ ಮೇರೆಗೆ ಅವರನ್ನು ಮತ್ತೆ ನೇಮಿಸಿಕೊಳ್ಳಲಾಗುತ್ತದೆ’ ಎಂದು ಆರೋಪಿಸಿದರು.