ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿಗೆ ಬೀಗಹಾಕಿ ಪ್ರತಿಭಟನೆ

Last Updated 20 ಜುಲೈ 2017, 8:33 IST
ಅಕ್ಷರ ಗಾತ್ರ

ಗಂಗಾವತಿ: ನರೇಗಾ ಯೋಜನೆ ಅಡಿ ಮಾಡಿದ ಕೆಲಸಕ್ಕೆ ಕೂಲಿ ಪಾವತಿಸುವಂತೆ  ಮಹಿಳೆಯರು ತಾಲ್ಲೂಕಿನ ಶ್ರೀರಾಮನಗರದ ಗ್ರಾಮ ಪಂಚಾಯಿತಿ ಕಚೇರಿಗೆ ಬುಧವಾರ ಬೀಗಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ಒಂದರಿಂದ ಐದನೇ ವಾರ್ಡ್‌ನ ಸುಮಾರು ನೂರಕ್ಕೂ ಹೆಚ್ಚು ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಕೂಲಿ  ಪಾವತಿಗೆ ಆಗುತ್ತಿರುವ ವಿಳಂಭಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ  ನಾಗಮ್ಮ, ‘ಕಳೆದ ನಾಲ್ಕೈದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ಆದರೆ, ಸಕಾಲಕ್ಕೆ ಹಣ ಸಿಗುತ್ತಿಲ್ಲ. ನಾಲ್ಕು ತಿಂಗಳ ವೇತನ  ಬಾಕಿ ಇದೆ’ ಎಂದು ದೂರಿದರು.

ಈಗಾಗಲೆ  400ಕ್ಕೂ ಹೆಚ್ಚು ಜನ ಕಳೆದ 120 ದಿನ  ಕೆಲಸ ಮಾಡಿದ್ದು, ಎಂಟು ಲಕ್ಷ ರೂಪಾಯಿ ಬಾಕಿ ಇದೆ ಎಂದರು.

ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಟೂರಿ ಶ್ರೀನಿವಾಸ, ಕೂಲಿಕಾರರಿಗೆ  ಒಂದೂವರೆ ಲಕ್ಷ  ಪಾವತಿ ಮಾಡಲಾಗಿದೆ. ಇನ್ನುಳಿದ  ಹಣ ಪಾವತಿಗೆ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಹನುಮಮ್ಮ, ಜಯಮ್ಮ,  ಲಕ್ಷ್ಮಿ, ಶಾಂತಿ, ಬಸಮ್ಮ, ದುರುಗಮ್ಮ, ಮಾರೆಮ್ಮ, ಹಸೀನಾಬೇಗಂ, ರಾಜೇಶ್ವರಿ, ಬುಡ್ಡಮ್ಮ, ಸುಮಂಗಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT