ಇಸ್ಲಾಮಾಬಾದ್: ಕಾಶ್ಮೀರ ವಿಷಯ ಸೇರಿದಂತೆ ಎಲ್ಲ ವಿಚಾರಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಸಿದ್ಧವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ತಹಮೀನಾ ಜಂಜುವಾ ತಿಳಿಸಿದ್ದಾರೆ.
ಇಸ್ಲಾಮಾಬಾದಿನಲ್ಲಿರುವ ಐರೋಪ್ಯ ಒಕ್ಕೂಟದ ವಿವಿಧ ದೇಶಗಳ ರಾಯಭಾರಿಗಳ ಜತೆಗೆ ತಮ್ಮ ಕಚೇರಿಯಲ್ಲಿ ನಡೆಸಿದ ಮಾತುಕತೆ ವೇಳೆ ಈ ವಿಷಯ ತಿಳಿಸಿದ್ದಾರೆ.
ಇದೇ ವೇಳೆ, ಭಾರತದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ ಅವರು, ‘ಕಾಶ್ಮೀರದಲ್ಲಿ ಭಾರತವು ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿದೆ’ ಎಂದೂ ಆರೋಪಿಸಿದರು.
ಪಾಕಿಸ್ತಾನದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯೋತ್ಪಾದಕರ ನಿಗ್ರಹಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತಂತೆಯೂ ತಹಮೀನಾ ಇದೇ ವೇಳೆ ಮಾಹಿತಿ ನೀಡಿದರು.