ಉಳ್ಳಾಲ: ತುಳು ಧಾರಾವಾಹಿ ನಿರ್ಮಾಪಕ ಕುಂಪಲ ಮೂರುಕಟ್ಟೆ ನಿವಾಸಿ ಪ್ರವೀಣ್ ಕುಮಾರ್ ಬಿ. (50) ಬುಧವಾರ ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಲ್ಲಿ ಮೂವರು ಪುತ್ರರು ಹಾಗೂ ಪತ್ನಿ ಇದ್ದ ಸಂದರ್ಭದಲ್ಲೇ ಕೋಣೆಯೊಳಗೆ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣದ ಅಡಚಣೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.