‘ಬಹುರಾಷ್ಟ್ರೀಯ ಕಂಪೆನಿಗಳು ಸಕಾರಣವಿಲ್ಲದೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುತ್ತಿವೆ. ಇದರಿಂದ ನಿರುದ್ಯೋಗ ಹೆಚ್ಚುತ್ತಿದೆ. ಅಲ್ಲದೆ, ಯುವ ಪದವೀಧರರಲ್ಲಿ ಉದ್ಯೋಗದ ಅಭದ್ರತೆ ಕಾಡುತ್ತಿದೆ. ಐ.ಟಿ–ಬಿ.ಟಿ ಉದ್ಯೋಗಿಗಳ ಜೀವನ ಭದ್ರತೆಗೆ ಒತ್ತಾಯಿಸಿ ಆಗಸ್ಟ್ 5ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದರು.