ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ನೂತನ ಪದಾಧಿಕಾರಿಗಳ ಸಭೆ ಇಂದು

Last Updated 20 ಜುಲೈ 2017, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ನೂತನವಾಗಿ ನೇಮಕಗೊಂಡಿರುವ ಪದಾಧಿಕಾರಿಗಳ ಮೊದಲ ಸಭೆ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆಯಲಿದೆ.

ಎಐಸಿಸಿ ಇತ್ತೀಚೆಗೆ 170 ಪದಾಧಿಕಾರಿಗಳನ್ನು ಕೆಪಿಸಿಸಿಗೆ ನೇಮಿಸಿದೆ. ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳಿಗೆ ಸಭೆಯಲ್ಲಿ  ಅಭಿನಂದನೆ ಸಲ್ಲಿಸುವ ಜೊತೆಗೆ, ಮುಂದಿನ ವಿಧಾನ ಸಭೆ ಚುನಾವಣೆ ಗಮನದಲ್ಲಿಟ್ಟು ಜಿಲ್ಲಾವಾರು ಜವಾಬ್ದಾರಿ ಹಂಚಿಕೆ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ರಾಜ್ಯದ ನಾಲ್ಕು ವಿಭಾಗಗಳಿಗೆ ಸಹ ಉಸ್ತುವಾರಿಗಳನ್ನಾಗಿ ಪಕ್ಷ ನೇಮಿಸಿರುವ ಎಐಸಿಸಿಯ ಕಾರ್ಯದರ್ಶಿಗಳಾದ  ಮಧು ಯಾಸ್ಕಿಗೌಡ, ವಿಷ್ಣುನಾಥನ್‌,  ಸೈಲಜಾನಾಥ್‌, ಮಾಣಿಕಂ ಠಾಗೂರ್‌, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರುಗಳಾದ ದಿನೇಶ್‌ ಗುಂಡೂರಾವ್‌ ಮತ್ತು ಎಸ್‌.ಆರ್‌. ಪಾಟೀಲ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT