ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು,‘ರಾಜ್ಯದ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 11.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಶುಲ್ಕ, ನವೀಕರಣ ವಂತಿಗೆ, ಹಾಗೂ ಸೆಸ್, ವಾರ್ಷಿಕ ಬ್ಯಾಂಕ್ ಬಡ್ಡಿ ರೂಪದಲ್ಲಿ ₹ 5,835 ಕೋಟಿ ಸಂಗ್ರಹವಾಗಿದೆ. ಈ ಮೊತ್ತದಿಂದ ರೈತರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇದನ್ನು ವಿರೋಧಿಸುತ್ತೇವೆ’ ಎಂದರು.