ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೊಣಚಿನಕುಪ್ಪೆ ಕೆರೆ ಹಸ್ತಾಂತರ

Last Updated 20 ಜುಲೈ 2017, 19:51 IST
ಅಕ್ಷರ ಗಾತ್ರ

ನೆಲಮಂಗಲ: ಪೆಪ್ಸಿಕೊ ಇಂಡಿಯಾ ಹಾಗೂ ‘ಆಲ್ಟರ್ನೇಟಿವ್‌ ಡೆವಲಪ್‌ಮೆಂಟ್‌’ ಸಂಸ್ಥೆಯ ಆಶ್ರಯದಲ್ಲಿ ಪುನರುಜ್ಜೀವನಗೊಳಿಸಿದ ತಾಲ್ಲೂಕಿನ ತೊಣಚಿನಕುಪ್ಪೆ ಕೆರೆಯನ್ನು ಬೂದಿಹಾಳ್‌ ಗ್ರಾಮ ಪಂಚಾಯಿತಿಗೆ ಗುರುವಾರ ಹಸ್ತಾಂತರಿಸಲಾಯಿತು.

ಸಣ್ಣ ನೀರಾವರಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ‘ಕೆರೆಗಳನ್ನು ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ  ಹೂಡುತ್ತೇವೆ. ಒತ್ತುವರಿ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದರೆ ಕೂಡಲೇ ದೂರು ನೀಡಬೇಕು. ಜಲಮೂಲಗಳ ಸಂರಕ್ಷಣೆಗೆ  ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಶಾಸಕ ಡಾ. ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ‘ಕೆರೆಗಳ ಅಭಿವೃದ್ಧಿಯಿಂದ ಅಂತರ್ಜಲ ಮಟ್ಟ ವೃದ್ಧಿಯಾಗಲಿದೆ’ ಎಂದರು.

ಪೆಪ್ಸಿಕೊ ಇಂಡಿಯಾದ ಉಪಾಧ್ಯಕ್ಷ ನಿತೇನ್‌ ಪ್ರಧಾನ್‌, ‘ಸುಸ್ಥಿತ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆಯ ಕಾರ್ಯಕ್ರಮದಡಿ ಈ ಕೆರೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT