ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ನರರೋಗ ತಜ್ಞ ಡಾ. ಶರಣ್ ಶ್ರೀನಿವಾಸನ್, ‘ಗಿಟಾರ್ ವಾದಕ, ಬಿಹಾರದ ಅಭಿಷೇಕ್ ಪ್ರಸಾದ್ ಅವರ ಕಿರುಬೆರಳು, ಉಂಗುರ ಬೆರಳುಗಳ ಚಲನೆ ಕಷ್ಟಕರವಾಗಿತ್ತು. ಇದರಿಂದ ಅವರಿಗೆ ಗಿಟಾರ್ ನುಡಿಸಲು ಕಷ್ಟವಾಗಿತ್ತು. ಮಿದುಳಿನ ನರಗಳಲ್ಲಿ ಉಂಟಾಗಿದ್ದ ಅತಿಸೂಕ್ಷ್ಮ ಗಾಯದಿಂದ ದೇಹದ ಕೆಲ ಭಾಗಕ್ಕೆ ಸಂಜ್ಞೆಗಳು ಸರಿಯಾಗಿ ರವಾನೆಯಾಗದೇ, ಇಂತಹ ಸಮಸ್ಯೆ ಕಾಣಿಸಿಕೊಂಡಿತ್ತು’ ಎಂದು ಹೇಳಿದರು.