ನವದೆಹಲಿ: ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ತೇವಾಂಶವಿರುವ ಪ್ರದೇಶಗಳು ಕಣ್ಮರೆಯಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದೆ. ಅಪಾರ ಪ್ರಮಾಣದ ಹಣವನ್ನು ಜಲಮೂಲಗಳ ಸಂರಕ್ಷಣೆಗೆ ಖರ್ಚು ಮಾಡುತ್ತಿರುವ ಬಗ್ಗೆ ವಿವರಣೆ ನೀಡುವಂತೆ ಇದೇ ವೇಳೆ ಕೇಳಿದೆ.
ಬೆಂಗಳೂರಿನಲ್ಲಿ ಕೆರೆಗಳು ಮಾಯವಾಗುತ್ತಿರುವ ಕುರಿತ ವರದಿಯನ್ನು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿದೆ.
‘ತೇವಾಂಶದ ಭೂಮಿ ಕಡಿಮೆಯಾಗಿರುವುದರಿಂದ 2015ರಲ್ಲಿ ಚೆನ್ನೈಯಲ್ಲಿ ಪ್ರವಾಹ ಬಂದಿತ್ತು. ಭೋಪಾಲ್ ಮತ್ತು ಬೆಂಗಳೂರಿನಲ್ಲಿ ಕೆರೆಗಳು ಕಡಿಮೆಯಾಗುತ್ತಿವೆ’ ಎಂದು ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಮತ್ತು ದೀಪಕ್ ಮಿಶ್ರಾ ಅವರನ್ನು ಒಳಗೊಂಡ ಪೀಠ ಹೇಳಿದೆ.