‘ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು ಮಾತೆ ಮಹಾದೇವಿ ಅವರೊಂದಿಗೆ ಸೇರಿಕೊಂಡು ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಹೋರಾಟ ನಡೆಸಿರುವುದು ನೋವು ತಂದಿದೆ. ಭಾಲ್ಕಿ ತಾಲ್ಲೂಕಿನಲ್ಲಿ ದಲಿತರು ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದುತ್ತಿದ್ದು, ಅವರಿಗೆ ದೀಕ್ಷೆ ನೀಡಿ ವೀರಶೈವ–ಲಿಂಗಾಯತ ಧರ್ಮವನ್ನು ಬಲಪಡಿಸುವ ಕೆಲಸ ಮಾಡಲಿ’ ಎಂದು ಸಿದ್ಧಲಿಂಗ ಸ್ವಾಮಿ ಸಲಹೆ ನೀಡಿದರು.