ಬಿ.ಸಿ.ರೋಡ್, ಗೂಡಿನಬಳಿ, ಪಾಣೆಮಂಗಳೂರು, ಮೆಲ್ಕಾರ್, ಮಾರ್ನಬೈಲು, ನಂದಾವರ ಮತ್ತಿತರ ಕಡೆಗಳಲ್ಲಿ ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ ಏರ್ಪಡಿಸಿದ್ದರು. ಈ ಪ್ರದೇಶದ ವಿವಿಧ ಧಾರ್ಮಿಕ ಕೇಂದ್ರಗಳ ಬಳಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿತ್ತು.
ವಿಡಿಯೊ ಚಿತ್ರೀಕರಣ ನಡೆಸುವ ಮೂಲಕ ಮಫ್ತಿ ಪೊಲೀಸರು ಕೂಡಾ ಅಲ್ಲಲ್ಲಿ ಗಸ್ತು ತಿರುಗುತ್ತಿದ್ದ ದೃಶ್ಯ ಕಂಡು ಬಂದಿದೆ. ಐಜಿಪಿ ಹರಿಶೇಖರನ್, ಎಸ್ಪಿ ಸುಧೀರ್ ಕುಮಾರ್ ರೆಡ್ಡಿ, ಎಎಸ್ಪಿ ಡಾ.ಅರುಣ್, ಇನ್ಸ್ಪೆಕ್ಟರ್ ಪ್ರಕಾಶ್, ನಗರ ಠಾಣಾಧಿಕಾರಿ ಎ.ಕೆ.ರಕ್ಷಿತ್ ಗೌಡ ಹಾಗೂ ಸಿಬ್ಬಂದಿ ಇದ್ದರು.