ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ತೂರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಗೋಲಿಬಾರ್‌, ಒಬ್ಬ ನಾಗರಿಕ ಸಾವು

Last Updated 21 ಜುಲೈ 2017, 11:05 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡಗಾಂ ಜಿಲ್ಲೆಯ ಬೀರ್ವಾ ಪ್ರದೇಶದಲ್ಲಿ ಶುಕ್ರವಾರ ಕಲ್ಲು ತೂರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದರಿಂದ ಒಬ್ಬ ನಾಗರಿಕ ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ತನ್ವೀರ್‌ ಅಹ್ಮದ್‌ ಪಾಲಾ ಎಂದು ಗುರುತಿಸಲಾಗಿದೆ. ಮೊಹಮ್ಮದ್‌ ಇಬ್ರಾಹಿಂ ವಾನಿ ಗಾಯಗೊಂಡವರು.

ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಾಶ್ಮೀರದಲ್ಲಿ ನಗರ ರೈಲು ಸೇವೆ ಸ್ಥಗಿತಗೊಂಡಿದೆ. ಶ್ರೀನಗರದಲ್ಲಿ ಬಂದ್‌ ರೀತಿಯ ಪರಿಸ್ಥಿತಿ ಇದೆ. ಶಾಲಾ ಕಾಲೇಜುಗಳು, ಅಂಗಡಿಗಳು ಮುಚ್ಚಿದ್ದು ಸ್ಥಳೀಯ ಸಾರಿಗೆ ಸೇವೆ ಸಂಪೂರ್ಣ ಬಂದ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT